Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಠಲಾಪುರ ಅರಣ್ಯದಲ್ಲಿ ಕುರಿಗಳಿಗೆ ಮೇವು ಹಕ್ಕು ನೀಡಬೇಕು : ಕೊಳಗಲ್ ಅಂಜಿನಪ್ಪ ಆಗ್ರಹ

ವಿಠಲಾಪುರ ಅರಣ್ಯದಲ್ಲಿ ಕುರಿಗಳಿಗೆ ಮೇವು ಹಕ್ಕು ನೀಡಬೇಕು : ಕೊಳಗಲ್ ಅಂಜಿನಪ್ಪ ಆಗ್ರಹ

ಬಳ್ಳಾರಿ(28) ವಿಠಲಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮೇಯಿಸಲು ಅನುಮತಿ ನೀಡಬೇಕೆಂದು ಬಳ್ಳಾರಿ ಜಿಲ್ಲಾ ಕುರುಬರ ಸಂಘದ ಮುಖಂಡ ಕೊಳಗಲ್ ಅಂಜಿನಪ್ಪ ಅವರು ರಾಜ್ಯ ಸರ್ಕಾರದ ಗಮನ ಸೆಳೆದಿದ್ದಾರೆ.

ಮಾತನಾಡಿದ ಅವರು, “ವಿಠಲಾಪುರದಲ್ಲಿ ಪ್ರತಿ ದಿನ 15,000ಕ್ಕೂ ಹೆಚ್ಚು ಕುರಿಗಳು ಅರಣ್ಯ ಪ್ರದೇಶದಲ್ಲಿ ಮೇವು ಹೊರುತ್ತಿವೆ. ಈ ಕುರಿ ಸಾಕಾಣಿಕೆಯಿಂದ 280ಕ್ಕೂ ಅಧಿಕ ಕುರಿಗಾಹಿಗಳ ಕುಟುಂಬಗಳು ನೇರವಾಗಿ ಅವಲಂಬಿತವಾಗಿವೆ. ಇದುವರೆಗೆ ಯಾವುದೇ ಅಡೆತಡೆಗಳಿಲ್ಲದೇ ಸಾಗಿದ್ದ ಕುರಿ ಸಾಕಾಣಿಕೆಗೆ ಇತ್ತೀಚೆಗೆ ಅರಣ್ಯ ಇಲಾಖೆ ತಡೆಗೋಡೆ ಹಾಗೂ ಮುಳ್ಳು ತಂತಿಗಳನ್ನು ಅಳವಡಿಸಿ ಅಡ್ಡಿಪಡಿಸುತ್ತಿದೆ. ಇದರಿಂದ ಕುರಿಗಳನ್ನು ಅರಣ್ಯ ಪ್ರದೇಶಕ್ಕೆ ದಾರಿಹಾಕಲು ಸಾಧ್ಯವಾಗದೆ, ಕುರಿಗಾಹಿಗಳ ಜೀವನ ಮಾರ್ಗ ತೀರಾ ಸಂಕಟಕ್ಕೆ ಒಳಗಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಈ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತ್ವರಿತಗತಿಯಲ್ಲೇ ಗಮನ ಹರಿಸಿ, ತಮ್ಮ ಶಿಷ್ಯ ಸಂಸದ ತುಕಾರಾಂ ಅವರ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಬ ಸಮುದಾಯಕ್ಕೆ ಸೇರಿದವರಾಗಿಯೂ, ಇದೇ ಸಮುದಾಯದ ಕುರಿಗಾಹಿಗಳ ಸಮಸ್ಯೆಗೆ ನಿರ್ಲಕ್ಷ್ಯ ವಹಿಸುತ್ತಿರುವುದು ದುರದೃಷ್ಟಕರ ಎಂದು ಅವರು ಟೀಕಿಸಿದರು. “ಕುರಿಗಳಿಗೆ ಮೇವು ಹೊರುವ ಹಕ್ಕು ಸಿಕ್ಕರೆ ಮಾತ್ರ ಗ್ರಾಮೀಣ ಭಾಗದ ನೂರುಾರು ಕುಟುಂಬಗಳು ಬದುಕುಳಿಯಲು ಸಾಧ್ಯ. ಇಲ್ಲದಿದ್ದರೆ ಅವರ ಜೀವನದ ಭವಿಷ್ಯ ಅಂಧಕಾರದಲ್ಲಿದೆ,” ಎಂದು ಕೊಳಗಲ್ ಅಂಜಿನಪ್ಪ ಹೇಳಿದರು.

[video width="848" height="478" mp4="https://news9today.in/wp-content/uploads/2025/06/VID-20250628-WA0015.mp4"][/video]

[video width="1280" height="720" mp4="https://news9today.in/wp-content/uploads/2025/06/VID-20250628-WA0016.mp4"][/video]

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.